ಭೂಮಿಗೀತ
ಭಾನುವಾರ, ಸೆಪ್ಟೆಂಬರ್ 6, 2026
ಅಕ್ಷರ ಕಲಿಸಿದ ದಲಿತ ಗುರು ಮಾದಪ್ಪ ನವರ ನೆನಪುಗಳು.
ಸೋನಿಯಾ ಗಾಂಧಿ ಎಂಬ ಹಿರಿಯ ಜೀವವೊಂದರ ಬದುಕಿನ ಒಳನೋಟಗಳು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಚುಕ್ಕಾಣಿಯಾಗಿರುವ ಸೋನಿಯಾ ಗಾಂಧಿಯವರ ಮೊದಲ ಆತ್ಮಕಥೆ 2009 ರಲ್ಲಿ ಪೆಂಗ್ವಿನ್ ಪ್ರಕಾಶನ ಸಂಸ್ಥೆಯಿಂದ ಪ್ರಕಟಗೊಂಡಿತ್ತು. ಇದೀಗ ಎಂಬತ್ತು ವರ್ಷ ಪೂರೈಸಿರುವ ಈ ಹಿರಿಯ ಜೀವ ತಮ್ಮ ಪೂರ್ಣಪ್ರಮಾಣದ ಆತ್ಮ ಚರಿತ್ರೆಯನ್ನು ಬರೆದಿದ್ದು, ಅಮೇರಿಕಾದ ಪ್ರಕಾಶನ ಸಂಸ್ಥೆಯೊಂದು ನವಂಬರ್ ಹತ್ತರಂದು ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡುತ್ತಿದೆ. ಭಾರತದಲ್ಲಿ ಸೋನಿಯಾ ಅವರ ನೂತನ ಆತ್ಮಚರಿತ್ರೆ ಬಿಲಾಂಗಿಗ್ ಕೃತಿಯನ್ನು ಪ್ರಕಟಿಸಲು ಒಪ್ಪಿಕೊಂಡಿದ್ದ ಪೆಂಗ್ವಿನ್ ಇಂಡಿಯಾ ಸಂಸ್ಥೆ ಇದೀಗ ಹಲವು ನೆಪಗಳನ್ನು ಹೇಳುತ್ತಾ ಹಿಂದೇಟು ಹಾಕಿದೆ. ಸೋನಿಯಾ ಗಾಂಧಿಯವರು ತಮ್ಮ ಎರಡನೇ ಕೃತಿಯಲ್ಲಿ ದಾಖಲಿಸಿರುವ ರಾಜಕೀಯ ಚಿಂತನೆಗಳು ಮತ್ತು ಬಿ.ಜೆ.ಪಿ. ಸರ್ಕಾರಗಳ ವೈಫಲ್ಯ ಕುರಿತಾದ ದೃಷ್ಟಿಕೋನಗಳು ಪೆಂಗ್ವಿನ್ ಪ್ರಕಾಶನಕ್ಕೆ ತೊಡಕಾಗಿವೆ.
ಪೆಂಗ್ವಿನ್ ಅಥವಾ ಆಕ್ಸ್ ಪರ್ಡ್ ಯೂನಿರ್ವಸಿಟಿ ಪ್ರೆಸ್ ಸೇರಿದಂತೆ ಬಹುತೇಕ ಬಹುರಾಷ್ಟ್ರೀಯ ಪ್ರಕಾಶನ ಸಂಸ್ಥೆಗಳು, ಯಾವುದೇ ಕೃತಿಯನ್ನು ಪ್ರಕಟಿಸುವ ಮುನ್ನ, ಲೇಖಕ ಅಥವಾ ಲೇಖಕಿ ಎಷ್ಟೇ ಪ್ರಸಿದ್ಧರಾಗಿದ್ದರೂ ಸಹ, ತಾವು ನೇಮಕ ಮಾಡಿಕೊಂಡಿರುವ ಸಂಪಾದಕರ ಮೂಲಕ ಕೃತಿಗಳನ್ನು ಪರಿಶೀಲನೆಗೆ ಒಳಪಡಿಸುತ್ತವೆ. ಅಲ್ಲಿ, ಭಾಷೆ, ನಿರೂಪಣೆಯ ಶೈಲಿ ಮತ್ತು ಕೃತಿಯ ವಿಷಯಗಳು ಪರಿಷ್ಕರಣೆಗೆ ಕೃತಿಯ ಲೇಖಕರ ಸಹಮತದೊಂದಿಗೆ ಒಳಪಡುವುದು ಸಹಜ ಕ್ರಿಯೆ. ಕಳೆದ ಒಂದೂವರೆ ದಶಕದಿಂದ, ದೇಶದ ನ್ಯಾಯಾಂಗ ವ್ಯವಸ್ಥೆ, ಚುನಾವಣಾ ಆಯೋಗ, ಬ್ಯಾಂಕಿಂಗ್, ಮತ್ತು ಇ.ಡಿ ಹಾಗೂ ಸಿ.ಬಿ.ಐ ಮುಂತಾದ ತನಿಖಾ ಸಂಸ್ಥೆಗಳಲ್ಲಿ ಮೂಗು ತೂರಿಸುವುದನ್ನು ಕಾಯಕ ಮಾಡಿಕೊಂಡಿರುವ ಕೇಂದ್ರ ಬಿ.ಜೆ.ಪಿ. ಸರ್ಕಾರವು, ಪ್ರಕಾಶನ ಸಂಸ್ಥೆಯ ಮೇಲೆ ಪ್ರಭಾವ ಬೀರಿರುವುದನ್ನು ತಳ್ಳಿಹಾಕುವಂತಿಲ್ಲ.
ಖಲಿಸ್ತಾನ್ ಉಗ್ರರ ನಿಯಂತ್ರಣಕ್ಕೆ ಅಮೃತ್ ಸರದ ಸ್ವರ್ಣದೇವಾಲಯದ ಯಾತ್ರಿಗಳ ನಿವಾಸದಲ್ಲಿ ಅಡಗಿದ್ದ ಬಿಂದ್ರನ್ ವಾಲೆ ಹಾಗೂ ಸಹಚರರನ್ನು ಆಪರೇಶನ್ ಬ್ಲೂಸ್ಟಾರ್ ಹೆಸರಿನಲ್ಲಿ1984 ರ ಜನವರಿ ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ, ಹುಟ್ಟಡಗಿಸಿದ ಇಂದಿರಾಗಾಂಧಿಯವರು, ಅದೇ ಸಿಖ್ ಸಮುದಾಯ ಅಂಗರಕ್ಷರ ಗುಂಡಿಗೆ ಜೀವತೆತ್ತರು. ಈ ಕಾರ್ಯಾಚರಣೆ ನಡೆದ ನಂತರ, ನಿಮ್ಮ ನಿವಾಸದಲ್ಲಿ ಸಿಖ್ ಸಮುದಾಯದ ಒಬ್ಬ ಸಿಬ್ಬಂದಿಯೂ ಇರಕೂಡದು ಎಂಬ ಗುಪ್ತಚರ ಇಲಾಖೆಯ ಎಚ್ಚರಿಕೆಯನ್ನು ತಿರಸ್ಕರಿಸಿದ್ದ ಅವರು ನನ್ನ ರಕ್ಷಣೆಗೆ ಇರುವ ಹಿಂದೂ-ಮುಸ್ಲಿಂ ಅಥವಾ ಎರಡು-ಸಿಕ್ ಸಮುದಾಯದ ಯೋಧರನ್ನು ನಾನು ಸಂದೇಹ ಪಡಲಾರೆ ಎಂದು ಘೋಷಿಸಿಕೊಂಡಿದ್ದರು. ಇಂತಹ ಉದಾತ್ತ ನಂಬಿಕೆ ಮತ್ತು ವಿಶ್ವಾಸ ಇಂದಿರಾ ಗಾಂಧಿಯವವರನ್ನು ಬಲಿ ತೆಗೆದುಕೊಂಡಿತು. ಇದೀಗ ಬಿ.ಜೆ.ಪಿ. ಪಕ್ಷವು ಮುಂಬರುವ ಪಂಜಾಬ್ ವಿಧಾನ ಸಭೆಯ ಚುನಾವಣೆಗೆ ಹಂತಕರಲ್ಲಿ ಒಬ್ಬನಾಗಿದ್ದ ಬಿಯಾಂತ್ ಸಿಂಗ್ ಪುತ್ರನಿಗೆ ಟಿಕೇಟ್ ಘೋಷಣೆ ಮಾಡಿದೆ.
ಮಂಗಳವಾರ, ಆಗಸ್ಟ್ 18, 2026
ನೊಂದವರ ನೋವ ನೋಯದವರೆತ್ತ ಬಲ್ಲರೋ?
ಕಳೆದ ಜುಲೈ ತಿಂಗಳಲ್ಲಿ ನಮ್ಮ ಮಕ್ಕಳು ದೆಹಲಿಯಲ್ಲಿ ನೀಟ್ ಪರೀಕ್ಷೆಯ ಅಕ್ರಮದ ವಿರುದ್ಧ ನಡೆಸಿದ ಧರಣಿಯ ಸಂದರ್ಭದಲ್ಲಿ ನಮ್ಮ ಮುಸ್ಲಿಂ ಮತ್ತು ಸಿಖ್ ಸಹೋದರರು ಹಸಿದ ಮಕ್ಕಳಿಗೆ ಆಹಾರ, ಕುಡಿಯಲು ನೀರು ಒದಗಿಸುತ್ತಿದ್ದಾಗ, ನನಗೆ 2004 ರ ಡಿಸಂಬರ್ ತಿಂಗಳಲ್ಲಿ ಸಂಭವಿಸಿದ ಸುನಾಮಿ ದುರಂತದ ಘಟನೆ ನೆನಪಾಗುತ್ತಿತ್ತು. ಏಳು ವರ್ಷದ ಹಿಂದೆ ಬರೆದಿದ್ದ ಈ ಲೇಖನವನ್ನು ಇಲ್ಲಿ ಮತ್ತೆ ಹಂಚಿಕೊಳ್ಳುತ್ತಿದ್ದೀನಿ.
ನಾನು
ಕರ್ನಾಟಕದಲ್ಲಿ ಈವರೆಗೆ ಕಂಡರಿಯದ ಪ್ರಕೃತಿಯ ವಿಕೋಪಕ್ಕೆ ಮತ್ತು ಸಂತ್ರಸ್ತರ ಬವಣೆಗೆ ಸಾಕ್ಷಿಯಾದ ನಂತರ ನನ್ನೊಳಗೆ ಒಂದು ರೀತಿಯ ಸೂತಕದ ಛಾಯೆ ಮನೆ ಮಾಡಿದೆ. ಬರದ ಬವಣೆಯಲ್ಲಿ ಕಳೆದ ಐದಾರು ವರ್ಷಗಳಿಂದ ನರಳಿದ ರೈತ ಸಮುದಾಯದ ಬದುಕು ಈ ಬಾರಿ ನೆರೆಯಲ್ಲಿ ಕೊಚ್ಚಿ
ಹೋಗಿದೆ. ಅನ್ನದಾತ ಎಂದು ಕರೆಸಿಕೊಂಡ ರೈತ ಈಗ
ನಿರಾಶ್ರಿತರ ಶಿಬಿರದಲ್ಲಿ ಕುಳಿತು ತುತ್ತು ಅನ್ನಕ್ಕೆ ಕೈಚಾಚುವುದನ್ನು ನೋಡಿ ಮನಸ್ಸು ಭಾರವಾಗಿದೆ.
ಧರ್ಮದ
ಹೆಸರಿನಲ್ಲಿ, ಜಾತಿಯ ಹೆಸರಿನಲ್ಲಿ ಭಾಷಣ ಬಿಗಿದು ಓಟು ಗಿಟ್ಟಿಸಿಕೊಂಡವರು ದಿಲ್ಲಿಯೆಂಬ ನಾಯಕಸಾನಿಯ ಸೆರಗಿನಲ್ಲಿ ಮರೆಯಾಗಿದ್ದಾರೆ. ಉತ್ತರ ಕರ್ನಾಟಕದ ಅದರಲ್ಲೂ ವಿಶೇಷವಾಗಿ ಬೆಳಗಾವಿ, ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳ ಬದುಕು ಮೂರಾಬಟ್ಟೆಯಾಗಿದೆ. ಭವಿಷ್ಯದ ಬದುಕಿನ ಆತಂಕ, ಸಾವು ಮತ್ತು ನೋವು ಇವುಗಳು ಎಲ್ಲರನ್ನೂ ಜಾತಿ, ಧರ್ಮದ ಬೇಧವಿಲ್ಲದೆ ಒಂದುಗೂಡಿಸಿವೆ.ಈ ಸಂದರ್ಭದಲ್ಲಿ ನನಗೆ
ಹದಿನಾಲ್ಕು ವರ್ಷಗಳ ಹಿಂದಿನ ತಮಿಳುನಾಡಿನಲ್ಲಿ ಸಂಭವಿಸಿದ ಸುನಾಮಿ ದುರಂತ ನೆನಪಾಯಿತು.
2004
ರ ಡಿಸೆಂಬರ್ ತಿಂಗಳಲ್ಲಿ ನಡೆದ ಈ ದುರಂತದಲ್ಲಿ ನಾಗಪಟ್ಟಣಂ
ಜಿಲ್ಲೆಗೆ ಅತೀವ ಹಾನಿಯಾಯಿತು. ಚಿದಂಬರಂ, ಕಾರೈಕಲ್ ಹಾಗೂ ಕಡಲೂರು ಮತ್ತು ನಾಗಪಟ್ಟಣಂ ಸಮೀಪದ ಕಡಲತೀರದ ಮೀನುಗಾರರ ಹಳ್ಳಿಗಳನ್ನು ಸಮುದ್ರ ಆಪೋಶನ ತೆಗೆದುಕೊಂಡಿತ್ತು. ಬದುಕುಳಿದ ಸಾವಿರಾರು ಜನ ಅನ್ನ ಮತ್ತು
ಸೂರಿಲ್ಲದೆ ಬಯಲಿಗೆ ಬಿದ್ದ ಸಂದರ್ಭದಲ್ಲಿ ನಾಗಪಟ್ಟಣಂ ಸಮೀಪದ ನಾಗೂರ್ ದರ್ಗಾ ಎಂಟು ಸಾವಿರ ಮಂದಿಗೆ ನಲವತ್ತು ದಿನಗಳ ಕಾಲ ಊಟ ಹಾಕಿ ಬಹುತ್ವದ
ಈ ನೆಲದಲ್ಲಿ ಮಾನವೀಯತೆ ಸತ್ತಿಲ್ಕ ಎಂಬುದನ್ನ ಸಾಬೀತು ಪಡಿಸಿತು. ತಂಜಾವೂರು ದೊರೆಯ ಕಣ್ಣಿನ ಬೇನೆ ವಾಸಿಮಾಡಿದ ಮುಸ್ಲಿಂ ಸಂತನಿಗೆ ದೊರೆ ನೀಡಿದ ಜಾಗದಲ್ಲಿ ಈ ದರ್ಗಾ ನಿರ್ಮಾಣಗೊಂಡಿದೆ.
ಜೊತೆಗೆ ತಮಿಳುನಾಡಿನ ಹಿಂದೂ ಮತ್ತು ಮುಸ್ಲಿಂ ಬಾಂಧವರ ಶ್ರದ್ಧಾ ಕೇಂದ್ರವಾಗಿದೆ.
ನಾಗಪಟ್ಟಣಂ
ಜಿಲ್ಲಾಧಿಕಾರಿ ಕಚೇರಿ ಎದುರುಗಿನ ಹತ್ತು ಎಕರೆ ಭೂಮಿಯಲ್ಲಿ ಹಾಕಲಾಗಿದ್ದ ತೆಂಗಿನ ಗರಿಯ ಚಪ್ಪರದಲ್ಲಿ ಆರು ಸಾವಿರ ಮಂದಿ ಮತ್ತು ದರ್ಗಾದಲ್ಲಿ ಜಾತಿ, ಧರ್ಮ ಬೇಧವಿಲ್ಲದೆ ಎರಡು ಸಾವಿರ ಮಂದಿ ಆಶ್ರಯ ಪಡೆದಿದ್ದರು ಬೆಳಿಗ್ಗೆ ಇಡ್ಲಿ ಅಥವಾ ಪೊಂಗಲ್, ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಾಂಬಾರ್ ಬಡಿಸಲಾಗುತ್ತಿತ್ತು.
ಅಲ್ಲಿ
ನೊಂದವರು ಮತ್ತು ನೋಯದವರ ನಡುವೆ ಮನುಷ್ಯತ್ವ ಸೇತುವೆ ನಿರ್ಮಾಣವಾಗಿತ್ತು. ಅನ್ನ ನೀಡುವವನಿಗೆ
ನಾನು ನೀಡುತ್ತಿದ್ದೇನೆ ಎಂಬ ಅಹಂಕಾರವಿರಲಿಲ್ಲ. ಬೇಡುವವನಿಗೆ ಪಡೆಯುತ್ತಿದ್ದೇನೆ ಎಂಬ ಕೀಳರಿಮೆಯಿರಲಿಲ್ಲ. ಅಕ್ಕಿ, ಬೇಳೆ ಕೊಟ್ಟವನು ಯಾವ ಧರ್ಮದವನು, ಅಡುಗೆ ಮಾಡಿದವನು ಯಾವ ಜಾತಿ? ಬಡಿಸುತ್ತಿರುವವನು ಯಾವ ಕುಲ? ಎಂಬ ಪ್ರಶ್ನೆ ಅಲ್ಲಿ ಯಾರ ಎದೆಯಲ್ಲೂ ಉದ್ಭವಿಸಲಿಲ್ಲ. ಕಾರೈಕಲ್, ನಾಗಪಟ್ಟಣಂ ಮತ್ತು ಕುಂಭಕೋಣಂ ತಾಲೋಕಿನಲ್ಲಿ ಅಸಂಖ್ಯಾತ ಮುಸ್ಲಿಂ ಕುಟುಂಬಗಳು ಕೃಷಿ ಮತ್ತು ವ್ಯಾಪಾರದ ಮೂಲಕ ಶ್ರೀಮಂತವಾಗಿವೆ. ಪ್ರತಿ ಕುಟುಂಬಗಳು ಲಾರಿ, ವ್ಯಾನುಗಳ ಮೂಲಕ ನಾಗೂರು ದರ್ಗಾಕ್ಕೆ ಅಕ್ಕಿ, ಬೇಳೆ, ಎಣ್ಣೆ, ತರಕಾರಿ ಕಳುಹಿಸಿ ತಮ್ಮ ಹೆಸರು ಎಲ್ಲಿಯೂ ಪ್ರಚಾರಕ್ಕೆ ಬರದಂತೆ ನೋಡಿಕೊಂಡವು.
ಆ
ವರ್ಷ ಡಿಸೆಂಬರ ಕೊನೆಯವಾರ
ಐದು ದಿನಗಳ ಕಾಲ ನೆಲದ ಮೇಲಿನ ನರಕ ಮತ್ತು ಸ್ಮಶಾನದಂತಿದ್ದ ಈ ಪ್ರದೇಶಗಳಲ್ಲಿ ಸುತ್ತಾಡುತ್ತಿದ್ದ
ನಾನು ಒಂದು ದಿನ ದರ್ಗಾದಲ್ಲಿದ್ದೆ. ಮುಸ್ಲಿ ಸಂತನ ಕುಟುಂಬದ ವಾರಸುದಾರರ ನೇತೃತ್ವದಲ್ಲಿ ನಡೆಯುತ್ತಿರುವ ಈ ದರ್ಗಾದ ಮುಖ್ಯಸ್ಥ
ರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಈ
ರೀತಿ ಊಟ ಹಾಕುವ ಧೈರ್ಯ
ನಿಮಗೆ ಹೇಗೆ ಬಂತು? ಎಂದು ಪ್ರಶ್ನಿಸಿದೆ. ಅವರು ನಗುತ್ತಾ ಹೀಗೆ ಉತ್ತರಿಸಿದರು.
‘’ದೇವರು
ನೆರವಿಗೆ ಬರುತ್ತಾನೆ ಎಂಬ ಇಚ್ಚಾಶಕ್ತಿಯಿಂದ ಆರಂಭಿಸಿದೆ. ದರ್ಗಾದ ಭಕ್ತರು ದೇವರ ರೂಪದಲ್ಲಿ ಸಹಕರಿಸಿದರು’’ ಎಂದು ಹೇಳಿದರು. ಜೊತೆಗೆ ಮಧ್ಯಾಹ್ನದ ಭೊಜನಕ್ಕೆ ಆಹ್ವಾನಿಸಿದರು. ಹತ್ತು ಕಿ.ಮಿ. ದೂರದ
ನಾಗಪಟ್ಟಣಂ ಗೆ ದೊಡ್ಡ ದೊಡ್ಡ
ಪಾತ್ರೆಗಳಲ್ಲಿ ರವಾನೆಯಾಗುತ್ತಿದ್ದ ಅನ್ನ,ಸಾಂಬಾರ್ ನೋಡುತ್ತಾ ದರ್ಗಾದ ಮುಖ್ಯಸ್ಥರ ಜೊತೆ ಊಟ ಮಾಡುವಾಗ ನನಗೆ
ಅನಿಸಿದ್ದು ಹೀಗೆ.
ಮಠ,
ಮಂದಿರ, ಮಸೀದಿಗಳೆಂದರೆ ಕೇವಲ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲ, ಮಾನವೀಯತೆಯ ಶ್ರದ್ಧಾಕೇಂದ್ರಗಳೂ ಹೌದು.
ಜಿಮೊಟೊ
ಎಂಬ ಆಹಾರ ಸರಬರಾಜು ಮಾಡುವ ಕಂಪನಿಯ ಡೆಲಿವರಿ ಬಾಯ್ ಮುಸ್ಲಿಂ ಎನ್ನುವ ಕಾರಣಕ್ಕೆ ಆಹಾರ ನಿರಾಕರಿಸಿದ ಹಾಗೂ ಕಂಪನಿಯ ವಿರುದ್ಧ ಸಿಡಿದೆದ್ದ ನಮ್ಮ
ನವನಾಗರೀಕತೆಯ ಅನಾಗರಿಕರಿಗೆ ಇಂತಹ ಸುನಾಮಿ ಒಮ್ಮೆ ಅವರ ಬದುಕಿನಲ್ಲಿ ಅಪ್ಪಳಿಸಬಾರದೆ ಎಂದು ಈ ಕ್ಷಣದಲ್ಲಿ ಹಂಬಲಿಸುತ್ತಿದ್ದೇನೆ.
ನೊಂದವರ
ನೋವ ನೋಯದವರೆತ್ತ ಬಲ್ಲರೊ? ಎಂಬ ಅಕ್ಕನ ವಚನದ ಸಾಲು ಈ ಸಂತ್ರಸ್ತರನ್ನು ನೋಡಿದಾಗ
ನೆನಪಾಗುತ್ತಿದೆ.
ಜಗದೀಶ್
ಕೊಪ್ಪ.
ಸೋಮವಾರ, ಆಗಸ್ಟ್ 17, 2026
ಆರ್.ಎಸ್.ಎಸ್. ಕಾರ್ಯಕರ್ತರಿಗೆ ಸ್ವಾತಂತ್ರ್ಯ ಇತಿಹಾಸದ ಪಾಠಗಳು
ಅಯ್ಯಾ ಮಿತ್ರರೇ, ನನ್ನೊಳಗೆ ನಿಮ್ಮ ಕುರಿತು ಸೈದ್ಧಾಂತಿಕ ಭಿನ್ನಾಭಿಪ್ರಾಯ ಇರುವುದನ್ನು ಹೊರತು ಪಡಿಸಿದರೆ, ಬೇರೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲಕಣ್ರಪ್ಪ. . ನಿಮ್ಮ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ನನಗೆ ಕಳೆದ ಮೂರು ದಶಕಗಳಿಂದಲೂ ಪರಿಚಯ. ಬೆಂಗಳೂರು ಮಲ್ಲೇಶ್ವರಂ ನ ಕ್ರೀಡಾಂಗಣ ಸಮೀಪವಿದ್ದ ನಿಮ್ಮ ರಾಜ್ಯ ಬಿ.ಜೆ.ಪಿ. ಕಚೇರಿಯಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿದ್ದುಕೊಂಡು, ಪತ್ರಕರ್ತರ ಜೊತೆ ಅವರು ನಡೆದುಕೊಳ್ಳುತ್ತಿದ್ದ ರೀತಿಗೆ ನಾನು ವಿಸ್ಮಯಗೊಂಡಿದ್ದೆ. ಸಾಮಾನ್ಯ ಹೆಂಚಿನ ಹಳೆಯ ಕಟ್ಟಡವಾಗಿದ್ದ ನಿಮ್ಮ ಕಚೇರಿಗೆ ನಾವು ಒಂದಿಷ್ಟು ಜನ ಪತ್ರಕರ್ತರು ನಿಮ್ಮ ನಾಯಕರನ್ನು ಭೇಟಿ ಮಾಡಲು ಹೋದರೆ, ಅತ್ಯಂತ ಗೌರವದಿಂದ ನಮ್ಮನ್ನು ನಡೆಸಿಕೊಳ್ಳುತ್ತಿದ್ದರು. ಸಮೀಪದ ವಿದ್ಯಾರ್ಥಿ ಭವನದಿಂದ ಕಾಫಿ ತರಿಸಿ ಕುಡಿಸಿ, ನಾಯಕರಿಗೆ ದೂರವಾಣಿ ಕರೆ ಮಾಡಿ ನಾವು ಬಂದಿರುವ ವಿಷಯ ತಿಳಿಸಿ, ಅವರೊಂದಿಗೆ ಸಂಪರ್ಕ ಕಲ್ಪಿಸುತ್ತಿದ್ದರು.
ಆರ್.ಎಸ್.ಎಸ್. ಹಿಂದೂ ರಾಷ್ಟ್ರದ ಭಕುತ ಮಣಿಗಳಾ, ಭಾರತದ ಇತಿಹಾಸವನ್ನು ಗಂಭೀರವಾಗಿ ಓದಿಕೊಳ್ಳಿರಯ್ಯ, ಈ ಜಗತ್ತಿನ ನೆಲದಲ್ಲಿ ಹಾರಾಡಿದ ಯಾವ ಸಾಮ್ರಾಟನೂ ಶಾಶ್ವತವಾಗಿ ಉಳಿದಿಲ್ಲ. ಎಲ್ಲರೂ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ. ಭಾರತೀಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಿರುವ ಗಾಂಧೀಜಿ ಮತ್ತು ಅವರ ಸಹವರ್ತಿಗಳಾದ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಪೊಳ್ಳು ಭಾಷಣಗಳಿಂದ ಅಳಿಸಲು ಸಾಧ್ಯವಿಲ್ಲ. ಏಕೆಂದರೆ, ಈ ನೆಲದಲ್ಲಿ ದಾರ್ಶನಿಕ ಚಿಂತನೆಗಳಿಗೆ ಎಂದಿಗೂ ಸಾವಿಲ್ಲ.
ಮಂಡ್ಯ ರೈತ ಸಂಘದ ಹಿರಿಯ ನಾಯಕ ಹೆಚ್.ಶ್ರೀನಿವಾಸ್ ಈಗ ನೆನಪು ಮಾತ್ರ.